ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಪಾನಿನ ವಿದೇಶಾಂಗ ಸಚಿವ ಯೋಶಿಮಾಸಾ ಹಯಾಶಿ ಅವರು ಆಸ್ಕರ್ ವಿಜೇತ ‘ಆರ್ಆರ್ಆರ್’ ಸಿನಿಮಾವನ್ನು ಕೊಂಡಾಡಿದ್ದಾರೆ.
ಎಸ್ಎಸ್ ರಾಜಮೌಳಿ ಅದ್ಭುತ ನಿರ್ದೇಶನ ಶೈಲಿ, ಜೂನಿಯರ್ ಎನ್ಟಿಆರ್ ಮತ್ತು ರಾಮ್ಚರಣ್ ಅಮೋಘ ಅಭಿನಯದ ಕಾಂಬಿನೇಶನ್ನಲ್ಲಿ ಮೂಡಿ ಬಂದ ಈ ಚಿತ್ರ ಭಾರತೀಯ ಚಿತ್ರರಂಗದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿ ಹಾರಿಸಿದೆ.ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಳ್ಳುವುದರ ಮೂಲಕ ‘ಆರ್ಆರ್ಆರ್ ದಿ ಬೆಸ್ಟ್ ಸಿನಿಮಾ’ ಎನಿಸಿಕೊಂಡಿದೆ.
ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿದ ಜೂನಿಯರ್ ಎನ್ಟಿಆರ್ ಮತ್ತು ರಾಮ್ಚರಣ್ ಜನಪ್ರಿಯತೆಯೂ ಹೆಚ್ಚಿದೆ. ಅವರು ಪ್ರಪಂಚದ ವಿವಿಧ ಭಾಗಗಳಿಂದ ಹೆಚ್ಚಿನ ಮೆಚ್ಚುಗೆ ಗಳಿಸಿದ್ದಾರೆ.
ಇದೀಗ ಜಪಾನಿನ ವಿದೇಶಾಂಗ ಸಚಿವ ಯೋಶಿಮಾಸಾ ಹಯಾಶಿ ಅವರು ಇತ್ತೀಚೆಗೆ ಆರ್ಆರ್ಆರ್ ಸಿನಿಮಾವನ್ನು ಹೊಗಳಿದ್ದಾರೆ. ಜೂನಿಯರ್ ಎನ್ಟಿಆರ್ ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ.
ಆರ್ಆರ್ಆರ್ ಸಿನಿಮಾದಲ್ಲಿ ಜೂನಿಯರ್ ಎನ್ಟಿಆರ್ ಅವರನ್ನು ಒಳಗೊಂಡ ದೃಶ್ಯಗಳು ಪ್ರೇಕ್ಷಕರನ್ನು ಮೂಕವಿಸ್ಮಿತರನ್ನಾಗಿಸಿದೆ. ಹೀಗಾಗಿಯೇ ಜಾಗತಿಕ ಮಟ್ಟದಲ್ಲಿ ಅವರ ನಟನೆಗೆ ಅಪಾರ ಪ್ರಶಂಸೆ ವ್ಯಕ್ತವಾಗಿದೆ. ಯೋಶಿಮಾಸಾ ಹಯಾಶಿ ಅವರು ಕೂಡ ನಟನ ಅಭಿಮಾನಿಯೆಂದು ಒಪ್ಪಿಕೊಂಡಿದ್ದಾರೆ. ಅವರನ್ನು ಜಪಾನ್ ರಾಷ್ಟ್ರದ ಜನರು ಆರಾಧಿಸುವ ಭಾರತೀಯ ನಟನನ್ನಾಗಿ ಮಾಡಿದ್ದಾರೆ.
ಭಾರತಕ್ಕೆ ಎರಡು ದಿನಗಳ ಭೇಟಿಗಾಗಿ ಬಂದಿದ್ದ ಹಯಾಶಿ ನಿನ್ನೆ ರಾತ್ರಿ ದೆಹಲಿಯಲ್ಲಿ ಎಸ್ಎಸ್ ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಭಾರತೀಯ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಇಂಡೋ-ಜಪಾನ್ ಫಾರಂ ಕಾನ್ಫರೆನ್ಸ್ ಭಾಗವಹಿಸಿದರು.
“ಭಾರತೀಯ ಚಿತ್ರಗಳಿಗೆ ನಮ್ಮ ದೇಶದಲ್ಲಿ ಉತ್ತಮ ಮನ್ನಣೆ ಸಿಗುತ್ತಿದೆ. ಜೂನಿಯರ್ ಎನ್ಟಿಆರ್ ಮತ್ತು ರಾಮ್ಚರಣ್ ಅಭಿನಯದ ಆರ್ಆರ್ಆರ್ ಸಿನಿಮಾ ಜಪಾನಿನಲ್ಲಿ ಬಹಳ ಜನಪ್ರಿಯವಾಗಿದೆ. ನಾನು ಆರ್ಆರ್ಆರ್ ಚಿತ್ರವನ್ನು ತುಂಬಾ ಇಷ್ಟಪಟ್ಟಿದ್ದೇನೆ. ಜೂನಿಯರ್ ಎನ್ಟಿಆರ್ ಅಭಿನಯ ತುಂಬಾ ಚೆನ್ನಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಟೋಕಿಯೋದಲ್ಲಿನ ಹಲವಾರು ಭಾರತೀಯ ರೆಸ್ಟೋರಂಟ್ಗಳಲ್ಲಿ ಪ್ರಸಿದ್ಧ ಹೈದರಾಬಾದಿ ಬಿರಿಯಾನಿಯನ್ನು ಅಲ್ಲಿನ ಜನ ಪ್ರೀತಿಯಿಂದ ಸವಿಯುತ್ತಿರುವುದಾಗಿ ಸಚಿವರು ಹೇಳಿದರು.