ಹೊಸದಿಗಂತ ಡಿಜಿಟಲ್ ಡೆಸ್ಕ್:
ಊಟದ ವೇಳೆ ಎರಡನೇ ಬಾರಿ ಹಪ್ಪಳ ಕೇಳಿದರು ಎಂಬ ಕಾರಣಕ್ಕೆ ಮದುವೆ ಸಮಾರಂಭದ ಟೇಬಲ್, ಕುರ್ಚಿಗಳಿಗೆ ಹಾನಿಯಾಗುವಂತೆ ಬಡಿದಾಡಿಕೊಂಡ ಘಟನೆ ಕೇರಳದ ಹರಿಪಾದದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಬರೋಬ್ಬರಿ 1.5 ಲಕ್ಷ ರೂಪಾಯಿ ನಷ್ಟವಾಗಿರುವುದಾಗಿ ಆರೋಪಿಸಿಲಾಗಿದೆ. ಅಷ್ಟಕ್ಕೂ ನಡೆದಿದ್ದೇನು ಅಂದರೆ ಮದುವೆ ಊಟದ ಸಂದರ್ಭ ವರನ ಕಡೆಯವರು ಎರಡನೇ ಬಾರಿಗೆ ಹಪ್ಪಳ ಕೇಳಿದ್ದಾರೆ. ಇದು ಎರಡು ಗುಂಪಿನ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ವಾಗ್ವಾದ ಹೊಡೆದಾಟಕ್ಕೆ ತಿರುಗಿದೆ. ಕಲ್ಯಾಣ ಮಂಟಪದಲ್ಲೇ ಎರಡು ಗುಂಪಿನವರು ಬಡಿದಾಡಿಕೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿ ಬಂದ ಕಲ್ಯಾಣ ಮಂಟಪದ ಮಾಲೀಕರು ಎರಡು ಗುಂಪಿನ ನಡುವೆ ಮಾತನಾಡಿ ಸಮಸ್ಯೆ ಇತ್ಯರ್ಥಪಡಿಸಿದ್ದಾರೆ. ಹಪ್ಪಳ ಗಲಾಟೆಯಲ್ಲಿ ಮಾಲೀಕರು ಸೇರಿ 20 ಜನರು ಗಾಯಗೊಂಡಿದ್ದಾರೆ.