ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಜಂಟಿ ಹೋರಾಟ: ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ವರದಿ, ಮೈಸೂರು:

ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ನಡೆಸಲಿದೆ ಎಂದು ಜೆಡಿಎಸ್‌ನ ರಾಜ್ಯಾಧ್ಯಕ್ಷರಾದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.

ಬುಧವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದೆ. ಈ ಬಗ್ಗೆ ನನಗೆ ತಿಳುವಳಿಕೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬರ ಪರಿಸ್ಥಿತಿ ಸಂಬAಧ ಇವರು ಏನು ಮಾಡಿದ್ದಾರೆ ಎಂದು ಹೇಳಲಿ. ಕೇಂದ್ರ ಸರ್ಕಾರದ್ದು ಎರಡನೇ ಸ್ಟೆಜ್. ಮೊದಲ ಸ್ಟೇಜ್ ನಲ್ಲಿ ಇವರು ಏನು ಮಾಡಿದ್ದಾರೆಂದು ಹೇಳಬೇಕು. ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣವನ್ನು ಏನು ಮಾಡಿದ್ದಾರೆ. ಕುಡಿಯುವ ನೀರು ಮೇವಿಗೆ ಹೊರತುಪಡಿಸಿದರೆ ಬೇರೆ ಯಾವುದಕ್ಕೂ ಹಣ ಬಿಡುಗಡೆ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬೆಳಗಾವಿ ಅಧಿವೇಶನದಲ್ಲಿ ಬರಗಾಲ ಪರಿಸ್ಥಿತಿಯನ್ನು ಪ್ರಮುಖ ವಿಚಾರವಾಗಿ ಪ್ರಸ್ತಾಪಿಸುತ್ತೇವೆ. ಬಿಜೆಪಿ ಜೆಡಿಎಸ್ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ಇಬ್ಬರೂ ಒಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!