ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ನಿಂದ ಬಿಡುಗಡೆಯಾಗುವ ಮೊದಲ ಅಭ್ಯರ್ಥಿಗಳ ಪಟ್ಟಿ ಶಾಶ್ವತ ಅಲ್ಲ. ಪ್ರತಿದಿನ ಹಾಗೂ ಪ್ರತಿ ಸರ್ವೆಯಲ್ಲೂ ಪಟ್ಟಿಯಲ್ಲಿ ಬದಲಾವಣೆ ಆಗುತ್ತದೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮೈಸೂರಿನಲ್ಲಿ ಹೇಳಿದ್ದಾರೆ.
ನಂಜನಗೂಡಿನ ನಂಜುಂಡೇಶ್ವರ ದೇವರ ದರುಶನ ಪಡೆಯಲು ಮೂರು ವರ್ಷಗಳ ನಂತರ ಆಗಮಿಸಿದ ಎಚ್ ಡಿ ದೇವೇಗೌಡರು ಹಾಗೂ ಕುಟುಂಬದ ಸದಸ್ಯರು, ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಚ್ ಡಿ ದೇವೇಗೌಡ, ಮುಂದಿನ ತಿಂಗಳಿನಿಂದ ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ. ಈಗಾಗಲೇ ಕುಮಾರಸ್ವಾಮಿ ಸೇರಿದಂತೆ ಕೆಲವು ಪ್ರಮುಖರು ಪಂಚರತ್ನ ಯಾತ್ರೆಯ ಮೂಲಕ ಜನರ ಬಳಿಗೆ ಹೋಗುತ್ತಿದ್ದಾರೆ. ಈಗ ಬಿಡುಗಡೆ ಆಗುತ್ತಿರುವ ಮೊದಲ ಪಟ್ಟಿ ಶಾಶ್ವತ ಅಲ್ಲ. ಪ್ರತಿದಿನ ಪ್ರತಿ ಸರ್ವೆಯಲ್ಲೂ ಬದಲಾವಣೆ ಆಗುತ್ತಿರುತ್ತದೆ ಎಂದು ಹೇಳಿದರು.