ಎಲೆಕ್ಷನ್ ಎದುರಿಸಲು ಜೆಡಿಎಸ್ ಸಜ್ಜು: ಈ ಬಾರಿ ಪಂಚರತ್ನ ರಥಯಾತ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
2023ರ ಚುನಾವಣೆಗೆ ಈಗಲೇ ಸಿದ್ಧತೆ ಆರಂಭಿಸಿರುವ ಜೆಡಿಎಸ್, ಪಕ್ಷವನ್ನು ಅಧಿಕಾರಕ್ಕೆ ತರಲು ಆಗಸ್ಟ್ ನಿಂದ ಪಂಚರತ್ನ ರಥಯಾತ್ರೆ ಆರಂಭಿಸಲಿದೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಈ ಮಾಹಿತಿ ಬಹಿರಂಗಗೊಳಿಸಿದ್ದಾರೆ.
ಈ ರಥಯಾತ್ರೆ ಮುಖೇನ ರಾಜ್ಯದ ಜನತೆ ನಮ್ಮನ್ನು ಆಶೀರ್ವದಿಸುವ ಭರವಸೆ ಇದೆ ಎಂದು ಅವರು ಹೇಳಿದ್ದಾರೆ.
2023 ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ. ನಾನೇ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ಭವಿಷ್ಯ ನುಡಿದಿದರು.
ನನ್ನ ಮೇಲೆ ಭಗವಂತನ ಅನುಗ್ರಹವಿದೆ. ಹೀಗಾಗಿ ರಾಜ್ಯದ ನೊಂದ ಜನರನ್ನು ರಕ್ಷಿಸುವ ಸಲುವಾಗಿ ಮತ್ತೆ ನಾನೇ ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ. ಚುನಾವಣೆಗೆ ಪೂರ್ವಸಿದ್ಧತೆಯಾಗಿ  ಪಂಚರತ್ನ ರಥಯಾತ್ರೆ ಆರಂಭವಾಗಲಿದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!