ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿರುದ್ಧ ಜೆಡಿಎಸ್ ಪ್ರತಿಭಟನೆ

ಹೊಸದಿಗಂತ ವರದಿ ಕಲಬುರಗಿ: 

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ತುಮಕೂರು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿರುದ್ಧ ಜೆಡಿಎಸ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಭಾವಚಿತ್ರವಿಟ್ಟು ಪ್ರತಿಭಟನೆ‌ ನಡೆಸಿದರು. ಈ ವೇಳೆ  ಮಾತನಾಡಿದ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶ್ಯಾಮರಾವ್ ಸೂರನ್, ದೇಶದ ಅತ್ಯುನ್ನತ ಹುದ್ದೆಯಾಗಿರುವ ಪ್ರಧಾನ ಮಂತ್ರಿ ಸ್ಥಾನದಲ್ಲಿ ಕೆಲಸ ಮಾಡಿ, ಅನೇಕ ಕೊಡುಗೆ ನೀಡಿದ ಹಿರಿಯ ನಾಯಕನ ಬಗ್ಗೆ (ದೇವೆಗೌಡರು ಇಂದೋ ಅಥವಾ ನಾಳೆ ಸಾಯುವವರು) ಅವಹೇಳನಕಾರಿ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಕ್ಷದ ಮೂರ್ಖತನದ ಪರಮಾವಧಿ ಎಂದರು.

ಕೂಡಲೇ ನೈತಿಕತೆ ಹೊತ್ತು, ಮಾಜಿ ಪ್ರಧಾನಿ ದೇವೆಗೌಡರ ಮನೆಗೆ ಹೋಗಿ ಅವರ ಕಾಲಿಗೆ ಬಿದ್ದು ಕ್ಷಮೇಯಾಚಿಸಬೇಕು. ತಪ್ಪಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!