ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರೈತರಿಗೆ 24 ಗಂಟೆಗಳ ಕಾಲವೂ ವಿದ್ಯುತ್ ಸರಬರಾಜು ವ್ಯವಸ್ಥೆ ಮಾಡುತ್ತೇವೆ. 1 ಎಕರೆಗೆ 10,000 ರೂಪಾಯಿ ಒದಗಿಸುವ ವ್ಯವಸ್ಥೆ ಮಾಡುತ್ತೇನೆ. ತರಕಾರಿ ಬೆಳೆಯುವ ರೈತರಿಗೆ ಗೋಡೌನ್ ನಿರ್ಮಾಣ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ H.D.ಕುಮಾರಸ್ವಾಮಿ ಹೇಳಿದರು.
ಬೆಳಗಾವಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕಡೆ ಪಂಚರತ್ನ ಯಾತ್ರೆ ಮಾಡಿದ್ದೇನೆ. ಸರ್ಕಾರಿ ಶಾಲೆಗಳನ್ನ ಉನ್ನತ ಮಟ್ಟಕ್ಕೆ ಒಯ್ಯುವ ಪ್ರಯತ್ನ , ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ 30 ಬೆಡ್ಗಳುಳ್ಳ ವ್ಯವಸ್ಥೆ ಮಾಡುತ್ತೇವೆ ಅಲ್ಲದೆ ದೇವದಾಸಿಯರಿಗೆ ಮನೆ ನಿರ್ಮಾಣ, ವೃದ್ಧರಿಗೆ 5,000 ರೂ. ನೀಡುವುದಾಗಿ ಕುಮಾರಸ್ವಾಮಿ ಆಶ್ವಾಸನೆ ನೀಡಿದರು.