ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಟಿಕೆಟ್ ಹಂಚಿಕೆಯ ರೋಚಕ ರಾಜಕೀಯ ಆಟದಿಂದಾಗಿ ಬಿಜೆಪಿ, ಜೆಡಿಎಸ್ ಸಂಕಷ್ಟಕ್ಕೆ ಸಿಲುಕಿವೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ದೆಹಲಿಗೆ ತೆರಳಿದ ಬಳಿಕ ಹೊಸ ಲೆಕ್ಕಾಚಾರ ಶುರುವಾಗಿದೆ. ಮಂಡ್ಯ ಕ್ಷೇತ್ರಕ್ಕೆ ಹೋರಾಟ ಮುಂದುವರಿದಿದ್ದು, ಸುಮಲತಾ ಅಂಬರೀಶ್ ಅವರು ಬಿಜೆಪಿಯಿಂದ ಸ್ಪರ್ಧಿಸುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.
ದಿಶಾ ಸಭೆಗೆಂದು ಮಂಡ್ಯಕ್ಕೆ ಬಂದಿದ್ದ ಸಂಸದೆ ಸುಮಲತಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗುವುದು ಖಚಿತ.
ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ವಿಚಾರದಲ್ಲಿ ಮೊದಲಿನಿಂದಲೂ ವಿವಾದವಿತ್ತು. ಬಿಜೆಪಿ ಹೈಕಮಾಂಡ್ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಅಧಿಕೃತ ನಿರ್ಧಾರಕ್ಕಾಗಿ ಕಾಯೋಣ. ಮಂಡ್ಯದಲ್ಲಿ ಬಿಜೆಪಿ ಗೆಲ್ಲುವುದು ಖಚಿತ ಎಂದು ಸುಮಲತಾ ತಿಳಿಸಿದ್ದಾರೆ.