ಹೊಸದಿಗಂತ ವರದಿ ಕೊಪ್ಪಳ:
ವಿದ್ಯುತ್ ಬಿಲ್ ಬಾಕಿ ವಸೂಲಾತಿಗೆ ತೆರಳಿದ್ದ ಜೆಸ್ಕಾಂ ಸಿಬ್ಬಂದಿ ಮೇಲೆ ಗ್ರಾಹಕನೊಬ್ಬ ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದಲ್ಲಿ ನಡೆದಿದೆ.
ಕೂಕನಪಳ್ಳಿ ಗ್ರಾಮದ ಚಂದ್ರಶೇಖರ ಈರಯ್ಯ ಹಿರೇಮಠ ಅವರು ಲೈನ್ಮನ್ ಮಂಜುನಾಥ ಅವರ ಮೇಲೆ ಹಲ್ಲೆ ಮಾಡಿದ್ದಾರೆ.
ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಕಾರಣ ಚಂದ್ರಶೇಖರ ಅರವ ಮನೆಯ ಗೃಹಬಳಕೆಯ ವಿದ್ಯುತ್ ಸಂಪರ್ಕವನ್ನು ಜೆಸ್ಕಾಂ ಸಿಬ್ಬಂದಿ ಕಡಿತಗೊಳಿಸಿದ್ದರು. ಇದರಿಂದ ಕೊಪಿತಗೊಂಡ ಚಂದ್ರಶೇಖರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಈ ಸಂಬಂಧ ಮುನಿರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.