Wednesday, September 27, 2023

Latest Posts

ಬ್ಯಾಂಕ್ ವಂಚನೆ ಪ್ರಕರಣ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೆನರಾ ಬ್ಯಾಂಕ್‌ಗೆ ವಂಚಿಸಿದ ಪ್ರಕರಣದಲ್ಲಿ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದಾರೆ. ಸಿಬಿಐ ಅಧಿಕಾರಿಗಳು ಮೇ 5ರಂದು ಗೋಯಲ್ ಅವರ ನಿವಾಸ ಮತ್ತು ಕಚೇರಿಗಳು ಸೇರಿದಂತೆ ಮುಂಬೈನ ಏಳು ಪ್ರದೇಶಗಳಲ್ಲಿ ಶೋಧ ನಡೆಸಿದ್ದರು.

ಇ.ಡಿ. ಅಧಿಕಾರಿಗಳು ಇಂದು (ಸೆಪ್ಟೆಂಬರ್ 2) ನರೇಶ್ ಗೋಯಲ್ ಅವರನ್ನು ಪಿಎಂಎಲ್​ಎ ವಿಶೇಷ ಕೋರ್ಟ್​​ಗೆ ಹಾಜರುಪಡಿಸಲಿದ್ದಾರೆ. ಕೆನರಾ ಬ್ಯಾಂಕ್​ನಿಂದ ಸಂಸ್ಥೆಯು 848 ಕೋಟಿ ರೂಪಾಯಿ ಸಾಲ ಪಡೆದಿದ್ದು,  ಅದರಲ್ಲಿ 538 ಕೋಟಿ ರೂಪಾಯಿಯನ್ನು ಮರುಪಾವತಿ ಮಾಡದೆ ಬಾಕಿ ಉಳಿಸಿಕೊಂಡಿತ್ತು.

538 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇಡಿ ತನಿಖೆ ನಡೆಯುತ್ತಿದೆ. ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್, ವಂಚನೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ಕ್ರಿಮಿನಲ್ ಆರೋಪ ಕಳೆದ ವರ್ಷ ನವೆಂಬರ್ 11ರಂದು ಅವರು ಅವ್ಯವಹಾರ ನಡೆಸಿದ್ದಾರೆ ಎಂದು ಲಿಖಿತ ದೂರು ನೀಡಲಾಗಿತ್ತು ಎಂದು ಸಿಬಿಐ ಎಫ್ಐಆರ್‌ನಲ್ಲಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!