ಚಿನ್ನಾಭರಣ ವಂಚನೆ ಪ್ರಕರಣ: ಐಶ್ವರ್ಯ ಗೌಡ ಅರ್ಜಿ ವಿಚಾರಣೆ ಮುಂದೂಡಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಐಶ್ವರ್ಯ ಗೌಡಳನ್ನು ಅರೆಸ್ಟ್ ಮಾಡಿದ್ದಾರೆ. ಇಡಿ ಬಂಧನ ಪ್ರಶ್ನಿಸಿ ಐಶ್ವರ್ಯಗೌಡ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಈ ಕುರಿತು ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಐಶ್ವರ್ಯ ಗೌಡ ಅರ್ಜಿಯ ವಿಚಾರಣೆ 22ಕ್ಕೆ ಮುಂದೂಡಿ ಆದೇಶ ಹೊರಡಿಸಿದರು.

ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ ಎಂದು ಐಶ್ವರ್ಯ ಗೌಡ ಪರವಾಗಿ ಹಿರಿಯ ವಕೀಲರು ವಾದ ಮಂಡಿಸಿದರು. ಈ ಸಂದರ್ಭ ಇಡಿ ಪರ ವಕೀಲರಿಂದ ವಾದ ಮಂಡನೆಗೆ ಕಾಲಾವಕಾಶ ಕೋರಲಾಯಿತು. ಬಳಿಕ ವಿಚಾರಣೆಯನ್ನು ಹೈಕೋರ್ಟ್ ಮೇ 22ಕ್ಕೆ ಮುಂದೂಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!