ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ನ ಲತೇಹಾರ್ ಜಿಲ್ಲೆಯಲ್ಲಿ ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿ ಇಬ್ಬರು ಪ್ರಮುಖ ನಕ್ಸಲ್ ನಾಯಕರ ಎನ್ಕೌಂಟರ್ ನಡೆದಿದೆ.
ಶನಿವಾರ ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಕಾರ್ಯಚರಣೆಯಲ್ಲಿ ನಕ್ಸಲ್ ದಂಗೆಕೋರ ಸಂಘಟನೆ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ)ನ ಇಬ್ಬರು ಕಾರ್ಯಕರ್ತರು ಹತರಾಗಿದ್ದಾರೆ. ಮೃತರಲ್ಲಿ ಪಪ್ಪು ಲೋಹ್ರಾನ ತಲೆಗೆ 10 ಲಕ್ಷ ರೂ. ಹಾಗೂ ಪ್ರಭಾತ್ ಗಂಜು ತಲೆಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.
ಈ ಪ್ರದೇಶದಲ್ಲಿ ಶಸ್ತ್ರಸಜ್ಜಿತ ನಕ್ಸಲರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಆಧಾರದ ಮೇಲೆ ಜಂಟಿ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು ನಡೆಸಿದ್ದವು.