ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿದ್ದು, 12 ಮಂದಿ ಅಸ್ವಸ್ಥರಾಗಿದ್ದಾರೆ.
ಕಲುಷಿತ ನೀರು ಕುಡಿದ ನಂತರ ಈ ಘಟನೆ ಸಂಭವಿಸಿದೆ, ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಾಂತಿ ಬೇಧಿಯಿಂದ ಬಳಲುತ್ತಿದ್ದ ಗೋವಿಂದೇಗೌಡ (62) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.