‘ಜ್ಞಾನವಾಪಿ ಮಸೀದಿ’ ಬೋರ್ಡ್ ತೆರವು: ‘ಜ್ಞಾನವಾಪಿ ಮಂದಿರ’ ಮರುನಾಮಕರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜ್ಞಾನವಾಪಿ ಮಸೀದಿಯಲ್ಲಿದ್ದ ಹಳೆಯ ಬೋರ್ಡ್ ನ್ನು ತೆರವುಗೊಳಿಸಲಾಗಿದೆ.ಇದೀಗ ಜ್ಞಾನವಾಪಿ ಮಂದಿರ ಎಂದು ಬೋರ್ಡ್ ಹಾಕಲಾಗಿದೆ.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಿನ್ನೆಯಿಂದ ಜ್ಞಾನವ್ಯಾಪಿಯಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಲಾಗಿದೆ.

31 ವರ್ಷಗಳ ನಂತರ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪೂಜೆ ನಡೆಯುತ್ತಿದೆ. ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಬುಧವಾರ (ಜನವರಿ 31) ಆವರಣದಲ್ಲಿರುವ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜಿಸುವ ಹಕ್ಕನ್ನು ನೀಡುವಂತೆ ಆದೇಶಿಸಿದೆ.

ವಾರಣಾಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ನಿಂದ ನಾಮನಿರ್ದೇಶನಗೊಂಡ ಅರ್ಚಕರು ಪೂಜೆ ನಡೆಸಲು ವ್ಯವಸ್ಥೆ ಮಾಡುವಂತೆ ನ್ಯಾಯಾಲಯ ನಿರ್ದೇಶನ ನೀಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!