ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ಷ್ಮಣ ಸವದಿ ಕಾಂಗ್ರೆಸ್ ಬಂದರೆ ಲಾಭ ಹೆಚ್ಚು, ನಮ್ಮ ಬಲ ಇದರಿಂದ ಇನ್ನಷ್ಟು ಹೆಚ್ಚಲಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಅವರ ಸೇರ್ಪಡೆ ಬಗ್ಗೆ ಹೈಕಮಾಂಡ್ ನಿರ್ಧಾರೆ ಮಾಡಲಿದೆ. ಬಿಜೆಪಿಯಿಂದ ಸವದಿ ಹೊರಬಂದಿದ್ದಾರೆ, ಕಾಂಗ್ರೆಸ್ ಸೇರುವ ಪ್ರಕ್ರಿಯೆ ನಡೆಯುತ್ತಿದೆ, ಈ ಬಗ್ಗೆ ಈಗಲೇ ಮಾತನಾಡುವುದು ಕಷ್ಟ ಎಂದಿದ್ದಾರೆ.
ಲಕ್ಷ್ಮಣ ಸವದಿ ಡಿ.ಕೆ. ಶಿವಕುಮಾರ್ ಕಳುಹಿಸಿದ ಫ್ಲೈಟ್ನಲ್ಲಿ ಬೆಂಗಳೂರಿಗೆ ಆಗಮಿಸಿದ್ದು, ಸಿದ್ದರಾಮಯ್ಯ ಮನೆಯಲ್ಲಿ ಮಾತುಕತೆ ನಡೆದಿದೆ. ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದಂತೆಯೇ ಸವದಿ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದರು. ಇದೀಗ ಸವದಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಡಿಕೆಶಿ ಘೋಷಣೆ ಮಾಡಿದ್ದಾರೆ.