ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು (54) ಮಂಗಳವಾ ರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ .”
ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು ಕಾರ್ಕಳ ಸರಕಾ ರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು . ಆದರೆ, ದಾರಿ ಮಧ್ಯೆ ಕೊನೆಯುಸಿರೆಳೆದರು .ಮೃತರು ಪತ್ನಿ, ಓರ್ವ ಪುತ್ರ ಹಾ ಗೂ ಪುತ್ರಿಯನ್ನು ಅಗಲಿದ್ದಾರೆ.
ಬೆಳದಿಂಗಳ ಸಾಹಿತ್ಯ ಸಮ್ಮೇ ಳನ, ಕವಿಗೋಷ್ಟಿಯಂಥ ಕಾ ರ್ಯ ಕ್ರಮಗಳನ್ನು ಸಂಘಟಿಸು ವ ಮೂಲಕ ಗುರುತಿಸಿಕೊಂಡಿದ್ದ ಅವರು ಪ್ರತಿಭಾ ವಂತರನ್ನು ಗುರುತಿಸಿ ಸನ್ಮಾನಿಸಿದ್ದರು . ಅಜೆಕಾರಿನಲ್ಲಿ ಆದಿ ಗ್ರಾಮೋತ್ಸವ ಕಾರ್ಯಕ್ರಮ ಆಯೋಜಿಸುತ್ತಿದ್ದರು .
ಮುಂಬಯಿಯ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಉಪಸಂಪಾದಕರಾಗಿದ್ದ ಅವರು ಬಳಿಕ ಮಂಗಳೂರಿನ ಜನವಾಹಿನಿ, ಡೈಜಿವಲ್ಡ್, ಕನ್ನಡ ಪ್ರಭ ಪತ್ರಿ ಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು .