ರಾಜ್ಯಕ್ಕೆ ಮತ್ತೊಮ್ಮೆ ಬರ್ತಿದ್ದಾರೆ ಜೆ.ಪಿ.ನಡ್ಡಾ, ಈ ಬಾರಿ ಎಲ್ಲಿ ಪ್ರಚಾರ? ಯಾವಾಗ? ಇಲ್ಲಿದೆ ಡೀಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏ.30ರಂದು ಶಿವಮೊಗ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ದಿನಾಂಕ ಸಮೀಪಿಸುತ್ತಿದೆ. ವಾರಂಟಿ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದಿಂದ ತಾಯಂದಿರಿಗೆ ವರ್ಷಕ್ಕೆ ಒಂದು ಲಕ್ಷ ರೂ. ನೀಡುವ ಕುರಿತು ಮಾತನಾಡಿದರು. ಇದು ಅಸಾಧ್ಯವಾದ ಹೇಳಿಕೆಯಾಗಿದ್ದು, ಕಾಂಗ್ರೆಸ್ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಟಾಂಗ್ ನೀಡಿದರು.

ದೇಶದ ಬಜೆಟ್ 45 ಲಕ್ಷ ರೂ. ಕೋಟಿ ಇದೆ. ದೇಶದಲ್ಲಿ 68 ಲಕ್ಷ ಕೋಟಿ ಮಹಿಳೆಯರಿದ್ದಾರೆ. ಕುಟುಂಬದ ಪ್ರತಿ ಮಹಿಳೆಗೆ 38 ಸಾವಿರ ಕೋಟಿ ರೂ. ಅವಶ್ಯಕತೆ. ಆದರೆ ಕಾಂಗ್ರೆಸ್ ಈ ಭರವಸೆ ನೀಡಿ ಮಹಿಳೆಯರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ಇದು ದೇಶ ಅಥವಾ ರಾಜ್ಯಕ್ಕೆ ಸೀಮಿತವಾದ ಪ್ರಣಾಳಿಕೆಯೋ ಗೊತ್ತಿಲ್ಲ ಎಂದು ಉತ್ತರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!