ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜ್ಯೂ.NTR ಆಗಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನವೆಂಬರ್ 1 ಕರ್ನಾಟಕ ರಾಜ್ಯೋತ್ಸವ ದಿನದಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ ಮಾಡಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ.
ವಿಧಾನಸೌಧದಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ನೀಡುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಪ್ಪು ಬದಲಾಗಿ ಅವರ ಪತ್ನಿ ಅಶ್ವಿನಿ ಸ್ವೀಕರಿಸಲಿದ್ದು, ಈ ಸಮಾರಂಭಕ್ಕೆ ತೆಲುಗು ಸೂಪರ್ ಸ್ಟಾರ್ ಜ್ಯೂ.ಎನ್ ಟಿ ಆರ್ ಆಗಮಿಸುತ್ತಿದ್ದಾರೆ.
ರಾಜ್ಯ ಸರ್ಕಾರದ ವತಿಯಿಂದ ಜ್ಯೂ.ಎನ್ ಟಿ ಆರ್ ಅವರಿಗೆ ಆಹ್ವಾನ ನೀಡಲಾಗಿತ್ತು. ಇದೀಗ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬರಲು ಜ್ಯೂ. ಎನ್ ಟಿ ಆರ್ ಒಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೂ ಸರ್ಕಾರ ಆಹ್ವಾನ ನೀಡಿದೆ.  ಆಗಮಿಸುವ ನಿರೀಕ್ಷೆವಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!