BIG NEWS | ನಟ ದರ್ಶನ್ ಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ. ಇದರಿಂದ 13 ವರ್ಷಗಳ ನಂತರ ನಟ ದರ್ಶನ್ ಮತ್ತೆ‌ ಜೈಲು ಸೇರುವಂತಾಗಿದೆ.

ಜುಲೈ 04ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಭೀಕರ ಹತ್ಯೆ ಹಿನ್ನೆಲೆ ಈಗಾಗಲೇ ಎ1 ಆರೋಪಿ ಪವಿತ್ರಾ ಗೌಡ ಸೇರಿ ಉಳಿದ 13 ಮಂದಿ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈಗ ದರ್ಶನ್ ಸೇರಿ ನಾಲ್ವರು ಪರಪ್ಪನ ಅಗ್ರಹಾರ ಸೇರಿದ್ದು, ಈ ಮೂಲಕ ಕೊಲೆ ಕೇಸ್ ನಲ್ಲಿ ಭಾಗಿಯಾದ 17 ಆರೋಪಿಗಳು ಕಂಬಿ ಎಣಿಸಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!