ಜೂನ್ 4 ‘ಮೋದಿಮುಕ್ತಿ ದಿವಸ್’ ಎಂದ ಕಾಂಗ್ರೆಸ್: ಸಂವಿಧಾನ್ ಹತ್ಯಾ ದಿವಸ್ ಆಚರಿಸುವ ಕೇಂದ್ರದ ನಿರ್ಧಾರದ ವಿರುದ್ಧ ಸಿಡಿಮಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೂನ್ 25 ರಂದು ಸಂವಿಧಾನ್ ಹತ್ಯಾ ದಿವಸ್ ಎಂದು ಆಚರಿಸುವ ಕುರಿತು ಕೇಂದ್ರ ಸರಕಾರ ಘೋಷಿಸಿದ್ದು, ಇತ್ತ ಈ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಜೂನ್ 4 ಅನ್ನು ‘ಮೋದಿಮುಕ್ತಿ ದಿವಸ್’ ಎಂದು ಆಚರಿಸಬೇಕು ಎಂದು ಹೇಳಿದೆ.

ಜೂನ್ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದ್ದು, ಸರಳ ಬಹುಮತಕ್ಕೆ 32 ಸ್ಥಾನಗಳ ಕೊರತೆ ಇತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎನ್‌ಡಿಎ ಮಿತ್ರಪಕ್ಷಗಳ ಬೆಂಬಲದೊಂದಿಗೆ ಸತತ ಮೂರನೇ ಬಾರಿ ಸರ್ಕಾರವನ್ನು ರಚಿಸಿದರು. ಈ ರೀತಿ ಸೀಟುಗಳನ್ನು ಕಳೆದುಕೊಂಡಿರುವುದು ಪ್ರಧಾನಿ ಮೋದಿಯವರ ನೈತಿಕ ಸೋಲು ಎಂದು ವಿರೋಧ ಪಕ್ಷಗಳ ಇಂಡಿಯಾ ಬಣ ಹೇಳಿದೆ.

https://x.com/Jairam_Ramesh/status/1811717750341140820?ref_src=twsrc%5Etfw%7Ctwcamp%5Etweetembed%7Ctwterm%5E1811717750341140820%7Ctwgr%5E6171ae9b2499aa44923d19001e254e31545e7db3%7Ctwcon%5Es1_&ref_url=https%3A%2F%2Ftv9kannada.com%2Fnational%2Fjune-4-should-be-observed-as-modimukti-diwas-congresss-first-reaction-to-centres-samvidhaan-hatya-diwas-national-news-in-kannada-rak-865157.html

ಸಂವಿಧಾನ್ ಹತ್ಯಾ ದಿವಸ್ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಜೈವಿಕ ಅಲ್ಲದ ಪ್ರಧಾನ ಮಂತ್ರಿಯ ಬೂಟಾಟಿಕೆಯಲ್ಲಿ ಮತ್ತೊಂದು ಹೆಡ್‌ಲೈನ್-ಹಪಾಹಪಿ ಕಸರತ್ತು. ಮೊದಲು ಹತ್ತು ವರ್ಷಗಳ ಕಾಲ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಅವರಿಗೆ 2024 ಜೂನ್ 4ರಂದು ಭಾರತದ ಜನರು ನಿರ್ಣಾಯಕ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಸೋಲನ್ನು ನೀಡಿದ್ದಾರೆ. ಆ ದಿನವನ್ನು ಇತಿಹಾಸದಲ್ಲಿ ಮೋದಿ ಮುಕ್ತಿ ದಿವಸ್ ಎಂದು ನೆನಪಿಸಲಾಗುವುದು ಎಂದು ಅವರು ಎಕ್ಸ್ ನಲ್ಲಿ ಬರೆದಿದ್ದಾರೆ.

ಇವರು ಭಾರತದ ಸಂವಿಧಾನ ಮತ್ತು ಅದರ ತತ್ವಗಳು, ಮೌಲ್ಯಗಳು ಮತ್ತು ಸಂಸ್ಥೆಗಳನ್ನು ವ್ಯವಸ್ಥಿತ ದಾಳಿಗೆ ಒಳಪಡಿಸಿದ ಜೈವಿಕವಲ್ಲದ ಪ್ರಧಾನಿ. ಇವರು ಮನುಸ್ಮೃತಿಯಿಂದ ಸ್ಫೂರ್ತಿ ಪಡೆದಿಲ್ಲ ಎಂಬ ಕಾರಣಕ್ಕಾಗಿ 1949 ರ ನವೆಂಬರ್‌ನಲ್ಲಿ ಭಾರತದ ಸಂವಿಧಾನವನ್ನು ತಿರಸ್ಕರಿಸಿದ ಸೈದ್ಧಾಂತಿಕ ಪರಿವಾರದ ಜೈವಿಕವಲ್ಲದ ಪ್ರಧಾನಿ. ಇವರು ಜೈವಿಕವಲ್ಲದ ಪ್ರಧಾನಿಯಾಗಿದ್ದು, ಅವರಿಗೆ ಪ್ರಜಾಪ್ರಭುತ್ವ ಎಂದರೆ ಡೆಮೊ-ಕುರ್ಸಿ ಮಾತ್ರ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!