ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ವೇಳೆ ಜೂನಿಯರ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವವ ಘಟನೆ ಗದಗದಲ್ಲಿ ನಡೆದಿದೆ.
ಗುತ್ತಿಗೆದಾರನ ಬಳಿ ಲಂಚ ಪಡೆಯುತ್ತಿದ್ದ ವೇಳೆ ಜೆ.ಇ.ವಿರೇಂದ್ರ ಸಿಂಗ್ ಕಾಟೆವಾಲೆ ಎಂಬುವವರನ್ನು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಲೆಗೆ ಕೆಡವಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜೆ.ಇ.ವಿರೇಂದ್ರ ಅವರು ನಗರಸಭೆ ವ್ಯಾಪ್ತಿಯ ಕಾಮಗಾರಿಯ ಬಿಲ್ ಪಡೆಯಲು ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಗುತ್ತಿಗೆದಾರನಿಂದ 1 ಲಕ್ಷ 50 ಸಾವಿರ ರೂಪಾಯಿ ಹಣ ಪಡೆದಿದ್ದಾರೆ. ನಂತರ ಆ ಹಣವನ್ನು ವಾಹನದಲ್ಲಿ ಇಡುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಜೆ.ಇ.ವಿರೇಂದ್ರ ಅವರನ್ನು ವಶ ಪಡಿಸಲಾಗಿದೆ.
ಲೋಕಾಯುಕ್ತ ಎಸ್.ಪಿ.ಸತೀಶ್ ಎಸ್ ಚಿಟಗುಬ್ಬಿ ನೇತೃತ್ವದಲ್ಲಿ ಸಿಪಿಐ ರವಿ ಪುರುಷೋತ್ತಮ, ಪಿಎಸ್ಐ ಅಜಿತ್ ಕಲಾದಗಿ ಅವರು ಜೆ.ಇ.ವಿರೇಂದ್ರ ಅವರ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದಾರೆ.