ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಟೆಂಪಲ್ ರನ್ ಮಾಡಿದ್ದಾರೆ.
ಶಿವಮೊಗ್ಗದ ರವೀಂದ್ರ ನಗರದಲ್ಲಿರುವ ಗಣೇಶ ದೇವಸ್ಥಾನ, ಕೋಟೆ ಆಂಜನೇಯ ದೇವಸ್ಥಾನ ಹಾಗೂ ತಿಲಕ ನಗರದ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಅಲ್ಲದೇ ಗೆಲುವುಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.