ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ವರದಿ ಸಲ್ಲಿಸಿದ ನ್ಯಾ. ನಾಗಮೋಹನ್ ದಾಸ್ ಆಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಒಳಮೀಸಲಾತಿ ಜಾರಿ ವಿಚಾರವಾಗಿ ನಡೆಯುತ್ತಿರುವ ಹೋರಾಟಗಳ ನಡುವೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ. ಗುರುವಾರ ಕ್ಯಾಬಿನೆಟ್ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರಿಗೆ ನ್ಯಾ. ನಾಗಮೋಹನ್ ದಾಸ್ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಮಧ್ಯಂತರ ವರದಿಯನ್ನು ಸಲ್ಲಿಸಿದರು.

ಎರಡು ತಿಂಗಳಿಗಿಂತ ‌ಹೆಚ್ಚು ನಾನು ಹಾಗೂ ನನ್ನ ತಂಡ ಆಳವಾದ ಅಧ್ಯಯನ ಮಾಡಿ 104 ಪುಟಗಳ ಒಳಮೀಸಲಾತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಇದರಲ್ಲಿ ತರಾತುರಿ ಪ್ರಶ್ನೆ ಇಲ್ಲ. ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ನಮ್ಮನ್ನು ಕೇಳಲಿಲ್ಲ. ನಾವೇ ಸ್ವಇಚ್ಛೆಯಿಂದ ವರದಿಯನ್ನು ‌ನೀಡಿದ್ದೇವೆ ಎಂದರು. ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ಕೇಳಿರಲಿಲ್ಲ. ಈ ವರದಿ ಮೇಲೆ ಸರ್ಕಾರ ಏನು ತೀರ್ಮಾನ ಮಾಡುತ್ತೊ ನೋಡೋಣ ಎಂದರು.

ಉದ್ಯೋಗಕಾಂಕ್ಷಿಗಳಿಗೆ ಅನ್ಯಾಯ ಆಗಬಾರದು. ಅವರಿಗೆ ಶಾಶ್ವತವಾದ ಪರಿಹಾರ ಕೊಡಬೇಕು.‌ ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ.‌ ವರದಿ ಬಗ್ಗೆ ಸರ್ಕಾರ ಏನೂ ಉತ್ತರ ಕೊಟ್ಟಿಲ್ಲ. ನೇಮಕಾತಿ ಬಗ್ಗೆ ನಾವು ಏನೂ ಸಲಹೆ ಕೊಟ್ಟಿಲ್ಲ ಎಂದರು. ವರದಿ ನೀಡಿರುವ ಹಂತದಲ್ಲಿ ಬೇರೆ ಯಾವ ವಿಚಾರವನ್ನು ಹೇಳಲು ಸಾಧ್ಯವಿಲ್ಲ. ಸರ್ಕಾರದ ತೀರ್ಮಾನ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಮಧ್ಯಂತರ ವರದಿ ನೀಡಿರುವುದು ಒಳ ಮೀಸಲಾತಿ ಜಾರಿಯ ವಿಳಂಬ ಧೋರಣೆಗೆ ಅನುಕೂಲ ಎಂಬ ವಾದವನ್ನು ನಿರಾಕರಣೆ ಮಾಡಿದ ಅವರು, ನನಗೆ ಹೀಗೆ ಅನ್ನಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!