ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ನಗದು ರಹಿತ ಆರೋಗ್ಯ ಸೇವೆ ನೀಡುವ ಜ್ಯೋತಿ ಸಂಜೀವಿನಿ ಯೋಜನೆ ಮುಂದಿನ ತಿಂಗಳಿನಿಂದ ಜಾರಿಗೆ ಬರಲಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿಂದು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಾನ್ವಿತ ಎಸ್ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 106 ವರ್ಷಗಳ ಇತಿಹಾಸ ಹೊಂದಿರುವ ಸಂಘ ಹಲವು ಬೇಡಿಕೆಗಳನ್ನು ಈಡೇರಿಸಿವೆ. ಇನ್ನೂ ಹಲವು ಬೇಡಿಕೆಗಳು ಬಾಕಿ ಇದ್ದು, ಹಳೆ ಪಿಂಚಣಿ ಯೋಜನೆ ಜಾರಿಯಾಗಬೇಕಿದೆ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ