ಕೆ.ಎಲ್​. ರಾಹುಲ್​ಗೆ ಕೋವಿಡ್ ದೃಢ: ಟಿ-20 ಸರಣಿಗೆ ಅಲಭ್ಯ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಸ್ತ್ರಚಿಕಿತ್ಸೆಗೊಳಗಾಗಿ ಗುಣಮುಖರಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿಯಲ್ಲಿ ತರಬೇತಿ ಪಡೆದುಕೊಳ್ಳುತ್ತಿದ್ದ ಕೆ.ಎಲ್​ . ರಾಹುಲ್​ಗೆ ಕೋವಿಡ್ ದೃಢಪಟ್ಟಿದ್ದು, ವೆಸ್ಟ್​ ಇಂಡೀಸ್​ ವಿರುದ್ಧದ ಟಿ-20 ಸರಣಿಗೆ ಲಭ್ಯರಾಗುವುದು ಸಂಶಯ ಎನ್ನಲಾಗಿದೆ . ಇದರ ಬೆನ್ನಲ್ಲೇ ತರಬೇತಿ ವೇಳೆ ಗಾಯಗೊಂಡಿರುವ ರವೀಂದ್ರ ಜಡೇಜಾ ಕೂಡ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.
ನಾಳೆ ಭಾರತ – ವೆಸ್ಟ್ ಇಂಡೀಸ್ ತಂಡಗಳ ಮಧ್ಯೆ ಮೊದಲ ಏಕದಿನ ಪಂದ್ಯ ನಡೆಯಲಿದೆ. ಮೊಣಕಾಲಿನ ನೋವಿಗೊಳಗಾಗಿರುವ ರವೀಂದ್ರ ಜಡೇಜಾ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ನಾಳೆಯ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಮುಂಬರುವ ಟಿ-20 ವಿಶ್ವಕಪ್​ ದೃಷ್ಟಿಯಿಂದ ಜಡೇಜಾಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!