ಫೆ.25-ಫೆ.26ರಂದು ಬನವಾಸಿಯಲ್ಲಿ ಕದಂಬೋತ್ಸವ ಆಚರಣೆ: ಸಚಿವ ಶಿವರಾಮ ಹೆಬ್ಬಾರ್

ಹೊಸದಿಗಂತ, ವರದಿ, ಬನವಾಸಿ:

ಕದಂಬರ ರಾಜಧಾನಿ ಬನವಾಸಿಯಲ್ಲಿ ಫೆ.25 ಹಾಗೂ ಫೆ.26ರಂದು ಕದಂಬೋತ್ಸವ ಆಚರಣೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದರು.
ಈ ಕುರಿತು ಹೊಸದಿಗಂತದ ಜೊತೆಗೆ ಮಾತನಾಡಿದ ಸಚಿವರು, ಕಳೆದ ಎರಡು ವರ್ಷಗಳಿಂದ ಮಂಗನ ಕಾಯಿಲೆ, ಕೊರೊನಾ ಆತಂಕದಿಂದ ಕದಂಬೋತ್ಸವ ನಡೆದಿಲ್ಲ. ಆದರೆ ಈ ಬಾರಿ ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ಕದಂಬೋತ್ಸವ ನಡೆಸುವ ಕುರಿತು ಇಂದು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿದ್ದೇನೆ. ಫೆ.25 ಹಾಗೂ ಫೆ.26ರಂದು ಮುಖ್ಯಮಂತ್ರಿಗಳು ಕದಂಬೋತ್ಸವ, ವಿವಿಧ ಕಾಮಗಾರಿ ಹಾಗೂ ಶ್ರೀ ಮಧುಕೇಶ್ವರ ದೇವಸ್ಥಾನದ ನೂತನ ರಥ ಸಮರ್ಪಣಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!