ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟಿದೆ.
ಹುಣಸೂರಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಮೈಸೂರು-ಮಾನಂದವಾಡಿ ರಸ್ತೆಯ ಡಿಬಿ ಕುಪ್ಪೆ ಗ್ರಾಮದ ಕೃಷಿ ಭೂಮಿಯಲ್ಲಿ ವಿದ್ಯುತ್ ತಂತಿ ಅಳವಡಿಸಲಾಗಿತ್ತು. ಉದಯ್ ಎನ್ನುವವರಿಗೆ ಸೇರಿದ ಜಮೀನು ಇದಾಗಿದ್ದು, ನಿಯಮ ಉಲ್ಲಂಘಿಸಿ ತಮ್ಮ ಮನೆಯಿಂದ ಸೋಲಾರ್ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸರಬರಾಜು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿ ಉದಯ್ ತಲೆಮರೆಸಿಕೊಂಡಿದ್ದಾರೆ.
30 ವರ್ಷದ ಗಂಡು ಕಾಡಾನೆಗೆ ವಿದ್ಯುತ್ ತಂತಿ ತಗುಲಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.