ಹೊಸದಿಗಂತ ವರದಿ ಮಡಿಕೇರಿ:
ಪೊನ್ನಂಪೇಟೆ ತಾಲೂಕಿನ ಹಾತೂರು ಗ್ರಾಮದಲ್ಲಿ ಕಡವೆ ಬೇಟೆಯಾಡಿರುವ ಪ್ರಕರಣವೊಂದನ್ನು ಅರಣ್ಯಾಧಿಕಾರಿಗಳು ಸೋಮವಾರ ಪತ್ತೆ ಮಾಡಿದ್ದು, 60 ಕೆ.ಜಿ.ಮಾಂಸ ವಶ ಪಡಿಸಿಕೊಂಡಿದ್ದಾರೆ.
ಕಡವೆಯನ್ನು ಕೊಂದು ಮಾಂಸ ಮಾರಾಟಕ್ಕೆ ಮುಂದಾಗಿದ್ದ ಸಂದರ್ಭ ಸ್ಥಳಕ್ಕೆ ವೀರಾಜಪೇಟೆ ಅರಣ್ಯ ವಲಯದ ಕಾರ್ಯಾಚರಣೆ ತಂಡ ದಾಳಿ ಮಾಡಿತ್ತು.
ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದು, 60 ಕೆ.ಜಿ. ಮಾಂಸ ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಕ್ಕಂಡ ಸತ್ಯುಂಜಯ ಹಾಗೂ ಗೋಣಿಕೊಪ್ಪ ನಿವಾಸಿ ಶರಣು ಮತ್ತು ಇತರರ ಮೇಲೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗೆ ಪೊನ್ನಂಪೇಟೆ ಆರ್ಎಫ್ಒ ಶಂಕರ ಅವರಿಗೆ ಹಸ್ತಾಂತರಿಸಲಾಗಿದೆ.
ವೀರಾಜಪೇಟೆ ಡಿಸಿಎಫ್ ವೈ. ಚಕ್ರಪಾಣಿ ಮಾರ್ಗದರ್ಶನದಲ್ಲಿ ಎಸಿಎಫ್ ಕೊಚ್ಚೆರ ಎ. ನೆಹರು, ಆರ್ಎಫ್ಒ ಕಳ್ಳಿರ ದೇವಯ್ಯ, ಡಿಆರ್ಎಫ್ಒ ಶ್ರೀಶೈಲ ಮಾಲಿಗೌಡ್ರ, ದೇಯಂಡ ಸಂಜಿತ್ ಸೋಮಯ್ಯ, ಸಿಬ್ಬಂದಿ ಸಿ. ಅರುಣಾ, ಮಾಲತೇಶ್ ಬಡಿಗೇರ್, ಚಂದ್ರಶೇಖರ ಅಮರಗೋಳ, ಅಶೋಕ, ಆರ್ಆರ್ಟಿ ಸಿಬ್ಬಂದಿ ಅನಿಲ್, ವಿಕಾಸ್, ಸುರೇಶ, ಮಹೇಶ್, ನಾಚಪ್ಪ, ಮುರುಘನ್, ಮಂಜು, ಸಚಿನ್, ವಿನೋದ್, ವಿನು, ಅಚ್ಚಯ್ಯ ಇದ್ದರು.