ಮಹಾನಾಯಕರು ಜೊತೆಗೂಡಿರುವುದರಿಂದ ‘ಕೈ’ ಪಾಳಯದಲ್ಲಿ ಭೀತಿ ಮನೆ ಮಾಡಿದೆ: ನಟಿ ತಾರಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಪರ ನಟಿ ಹಾಗೂ ಬಿಜೆಪಿ ನಾಯಕಿ ತಾರಾ ಭರ್ಜರಿ ಪ್ರಚಾರ ನಡೆಸಿದರು.

ಬೋಲೋ ಭಾರತ್ ಮಾತಾಕೀ ಜೈ, ಜೈ ಶ್ರೀರಾಮ್ ಎಂದು ಭಾಷಣ ಆರಂಭಿಸಿದ ತಾರಾ, ಜೆಡಿಎಸ್ ಅಭ್ಯರ್ಥಿ ಕುಮಾರಣ್ಣ ಅವರ ಗೆಲುವಿನ ಪ್ರಚಾರದಲ್ಲಿ ನಾನೂ ಭಾಗಿಯಾಗಿದ್ದೇನೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಕೆಲವರಿಗೆ ಅಚ್ಚರಿ ತಂದಿದೆ, ಕೆಲವರಿಗೆ ಆಘಾತ ತಂದಿದೆ ಮತ್ತು ಪ್ರತಿಪಕ್ಷಗಳಿಗೆ ಭಯ ಹುಟ್ಟಿಸಿದೆ ಎಂದು ತಾರಾ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ ನಾಯಕರಾದ ಬಿಎಸ್ ಯಡಿಯೂರಪ್ಪ ಮತ್ತು ಎಚ್‌ಡಿ ದೇವೇಗೌಡರು ತಮ್ಮ ರಾಜಕೀಯ ಜೀವನದಲ್ಲಿ ಹೋರಾಡಿದ ಕ್ಷೇತ್ರ ಮಂಡ್ಯ, ಆದರೆ ಈ ದೊಡ್ಡವರ ನಡುವಿನ ನಂಟು ಕಾಂಗ್ರೆಸ್ ನಾಯಕರಲ್ಲಿ ದಿಗ್ಭ್ರಮೆಯನ್ನುಂಟು ಮಾಡಿದೆ ಎಂದು ತಾರಾ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!