ಮೇಕೆದಾಟು ಯೋಜನೆಗೆ ಆಗ್ರಹಿಸಿ ಇಂದು ಕೊನೆ ದಿನದ ಪಾದಯಾತ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೈ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ.
ಕೊರೋನಾ ಕಾರಣದಿಂದ ಅರ್ಧಕ್ಕೇ ನಿಂತಿದ್ದ ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ಮತ್ತೆ ಆರಂಭಿಸಿದ್ದರು. ಇಂದು ಪಾದಯಾತ್ರೆ ಕೊನೆ ದಿನವಾಗಿದ್ದು, ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ಸಮಾರಂಭ ನಡೆಯಲಿದೆ.
ಅರಮನೆ ಮೈದಾನದಿಂದ ಇವತ್ತಿನ ಪಾದಯಾತ್ರೆ ಆರಂಭವಾಗಿದೆ.
ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿರುವ ಹಿನ್ನೆಲೆ ಮಲ್ಲೇಶ್ವರಂ, ಮೇಕ್ರಿ ಸರ್ಕಲ್ ಹಾಗೂ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಆಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!