ಪೆರಡಾಲ ಸೇವಾ ಸಹಕಾರಿ ಬ್ಯಾಂಕ್‌ನ ಮಾಜಿ ನಿರ್ದೇಶಕ ಕಜಳ ಶಿವರಾಮ ಭಟ್ ವಿಧಿವಶ

ಹೊಸದಿಗಂತ ವರದಿ ಕಾಸರಗೋಡು: 

ಬದಿಯಡ್ಕ ನೀರ್ಚಾಲು ಸಮೀಪದ ಕಜಳ ನಿವಾಸಿ ಶಿವರಾಮ ಭಟ್ (66) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.

ಹಿಂದೂಸ್ಥಾನ್ ಮೆಶಿನ್ ಟೂಲ್ಸ್ ಸಂಸ್ಥೆ (ಎಚ್ಎಂಟಿ) ಯಲ್ಲಿ ವಿವಿಧ ಹುದ್ದೆಗಳಲ್ಲಿ ದುಡಿದಿದ್ದ ಅವರು ದೇಶದ ಹಲವೆಡೆ ಕಾರ್ಯನಿರ್ವಹಿಸಿದ್ದರು. ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ ನ ಮಾಜಿ ನಿರ್ದೇಶಕರಾಗಿದ್ದರು. ವೃತ್ತಿಯಿಂದ ನಿವೃತ್ತರಾದ ಬಳಿಕ ಸ್ವಗ್ರಾಮದಲ್ಲಿ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿ ಸಾಮಾಜಿಕ ಚಟುವಟಿಕೆಗಳ ಮೂಲಕ ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಅವರನ್ನು ಅಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!