ಕಳಸಾ ಬಂಡೂರಿ ಯೋಜನೆಗೆ ಕೇಂದ್ರದಿಂದ ಸಿಕ್ಕಿದೆ ಗ್ರೀನ್ ಸಿಗ್ನಲ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗವು ಅನುಮತಿ ನೀಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.  ಉತ್ತರ ಕರ್ನಾಟಕ ಭಾಗದ ಜನರಿಗೆ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಎಂದು ಸಿಎಂ ಹೇಳಿದ್ದಾರೆ.
ಬಹಳ ವರ್ಷದ ಕನಸು ನನಸಾಗಿದೆ. ಇಡೀ ಕರ್ನಾಟಕ ಭಾಗದ ಜನತೆ ಹಾಗೂ ಎಲ್ಲಾ ಸದಸ್ಯರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನೀರಾವರಿ ಸಚಿವ ಗೋವಿಂದ್ ಕಾರಜೋಳ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!