ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾಷಾ ವಿವಾದದ ನಡುವೆ ಕಮಲ್ ಹಾಸನ್ ಬೆಂಗಳೂರಿನಲ್ಲಿ ನಡೆದ ದುರಂತದ ಬಗ್ಗೆ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಥಗ್ಲೈಫ್ ರಿಲೀಸ್ ಆಗಿಲ್ಲ. ಈ ಮಧ್ಯೆ ಕಮಲ್ ಹಾಸನ್ ಬೆಂಗಲೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಘಟನೆ ನನ್ನ ಮನಸ್ಸಿಗೆ ನೋವುಂಟು ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.
ಎಕ್ಸ್ (ಟ್ವಿಟರ್) ಪೋಸ್ಟ್ನಲ್ಲಿ, “ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ದುರಂತ. ತೀವ್ರ ದುಃಖಿತನಾಗಿದ್ದೇನೆ ಮತ್ತು ಈ ದುಃಖದ ಕ್ಷಣದಲ್ಲಿ ನನ್ನ ಹೃದಯವು ಸಂತ್ರಸ್ತ ಕುಟುಂಬಗಳೊಂದಿಗಿವೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ” ಎಂದು ಹೇಳಿದ್ದಾರೆ.
ನಟನ ಪೋಸ್ಟ್ ಮಿಶ್ರ ಪ್ರತಿಕ್ರಿಯೆಗೆ ಆಹ್ವಾನವಿಟ್ಟಿದೆ. ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಈಗ ಬೆಂಗಳೂರು ದುರ್ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎಂಬರ್ಥದಲ್ಲಿ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.