ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಡೂರು ಉಪಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಸದ್ದಿಲ್ಲದೇ ಹೋಗಿ ಕಾಂಗ್ರೆಸ್ಗೆ ಕಂಟಕ ತರುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ.
ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಕೆಲವು ಕಾಂಗ್ರೆಸ್ ನಾಯಕರು ಆಂತರಿಕವಾಗಿ ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಅದನ್ನೇ ಬಂಡವಾಳ ಮಾಡಿಕೊಳ್ಳಲು ಜನಾರ್ದನ ರೆಡ್ಡಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರಾ ಎಂಬ ಪ್ರಶ್ನೆ ಮೂಡಿದೆ.
ಇತಿಹಾಸದಲ್ಲೇ ಇಲ್ಲಿಯವರೆಗೆ ಸಂಡೂರಿನಲ್ಲಿ ಬಿಜೆಪಿ ಗೆದ್ದಿಲ್ಲ. ಹೀಗಾಗಿ ಈ ಬಾರಿ ಹೇಗಾದರೂ ಮಾಡಿ ಕಮಲ ಅರಳಿಸಬೇಕು ಎಂದು ನಿರ್ಧರಿಸಿದ್ದಾರೆ. ಇದಕ್ಕಾಗಿಯೇ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರನ್ನು ಗೆಲ್ಲಿಸಲು ರೆಡ್ಡಿ ಪಣತೊಟ್ಟಿದ್ದಾರೆ.