ಹೊಸದಿಗಂತ ವರದಿ,ಕಲಬುರಗಿ:
ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಡೆದ ಕೋಟಿ ಕೋಟಿ ಲೂಟಿ ಮಾಡಿ ಪರಾರಿಯಾಗಿದ್ದ ಆರೋಪಿ ಪಂಡರಿನಾಥ್ ಎಂಬುವನನ್ನು ಮಂಗಳೂರು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ.
ಕಲಬುರಗಿ, ಯ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಪಂಡರಿನಾಥ್ ಕಾಯ೯ ನಿವ೯ಹಿಸುತ್ತಿದ್ದನು. ಇಲಾಖೆಯಲ್ಲಿ ಕೋಟಿ ಕೋಟಿ ರೂಪಾಯಿ ಲೂಟಿ ಮಾಡಿ ಪರಾರಿಯಾಗಿದ್ದನು.
ಬಂಧನವಾದ ಆರೋಪಿ ಪಂಡರಿನಾಥ್ ವ್ಯಾಟ್ ನಮೂನೆ ಫಾರಂ ನಂಬರ್ 156 ದುಬ೯ಳಕೆ ಮಾಡಿಕೊಂಡು ಕೋಟಿ ಕೋಟಿ ರೂಪಾಯಿ ಹಣವನ್ನು ಲೂಟಿ ಹೊಡೆದಿದ್ದನು.
ಲೂಟಿ ಮಾಡಿ ಪರಾರಿಯಾದ ಬಳಿಕ ಕಲಬುರಗಿ ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಾಗುತ್ತಿದ್ದಂತೆ, ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಪಂಡರಿನಾಥ್, ಸ್ಟೆಷನ್ ಬಜಾರ್ ಪೋಲಿಸರ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.