ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಹಿಮಾಚಲ ಪ್ರದೇಶದ (Himachal Pradesh) ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಸ್ಪರ್ಧಿಸಲಿದ್ದಾರೆ. ಇತ್ತ ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ನಡಿ ಕಂಗನಾ ಮಂಡಿ ಪ್ರವಾಸ ಕೈಗೊಂಡಿದ್ದಾರೆ. ಮಂಡಿ ಕ್ಷೇತ್ರದ ಮುಖಂಡರ ಜೊತೆ ಭೇಟಿ, ಸಭೆ ನಡೆಯುತ್ತಿದೆ.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಕಂಗನಾ, ಹೋಳಿ ಶುಭಾಶಯ ಕೋರುವ ಮೂಲಕ ರಾಜಕೀಯ ಪ್ರವೇಶದ ಕುರಿತೂ ಮಾತನಾಡಿದ್ದಾರೆ.
ನನಗೆ ಸವಾಲುಗಳು ಹೊಸದೇನಲ್ಲ. ನನ್ನ ಜನ್ಮಸ್ಥಳ ನನ್ನನ್ನು ಮರಳಿ ಕರೆದಿರುವುದು ನನ್ನ ಅದೃಷ್ಟ. ನಾನು ಚಿಕ್ಕ ವಯಸ್ಸಿನಲ್ಲಿಯೇ ವೃತ್ತಿಗಾಗಿ ಮನೆ ತೊರೆದಿದ್ದೇನೆ ಮತ್ತು ಅನೇಕ ಅಡೆತಡೆಗಳನ್ನು ಎದುರಿಸಿದ್ದೇನೆ. ಅದಕ್ಕಾಗಿಯೇ ದೇವರು ನನಗೆ ನನ್ನ ಜನರ ಸೇವೆ ಮಾಡುವ ಶಕ್ತಿಯನ್ನು ಕೊಟ್ಟಿದ್ದಾನೆ. ಮಂಡಿಯ ಜನರು ನನ್ನನ್ನು ಆಯ್ಕೆ ಮಾಡಿದರೆ ನನ್ನ ಕೈಲಾದಷ್ಟು ಸೇವೆ ಮಾಡುತ್ತೇನೆ. ನಾನು ಅತ್ಯಂತ ಭಾವುಕಳಾಗಿದ್ದೇನೆ. ಇದು ನನಗೆ ಮತ್ತು ನನ್ನ ಕುಟುಂಬಕ್ಕೆ ಭಾವನಾತ್ಮಕ ಕ್ಷಣವಾಗಿದೆ ಎಂದಿದ್ದಾರೆ.