ಕಂಗನಾ ಹತ್ತು ಸಿನಿಮಾಗಳಲ್ಲೂ ನಟಿಸಿಲ್ಲ ಆದ್ರೂ ಪದ್ಮಶ್ರೀ ನೀಡಿದ್ರು: ನಟಿ ಜಯಸುಧಾ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರಕಾರವು ಪ್ರಶಸ್ತಿಗಳ ವಿಷಯದಲ್ಲಿ ತಾರತಮ್ಯ ಮಾಡುತ್ತಿದೆ ಎಂದು ದಕ್ಷಿಣದ ಹಿರಿಯ ನಟಿ ಜಯಸುಧಾ ಆರೋಪ ಮಾಡಿದ್ದಾರೆ.
ಅದ್ರಲ್ಲೂ ಬಾಲಿವು ನಟಿ ಕಂಗನಾ ರಣಾವತ್ ಅವರ ಹೆಸರನ್ನೇ ಪ್ರಸ್ತಾಪಿಸಿ, ‘ಕಂಗನಾ ಹತ್ತು ಸಿನಿಮಾಗಳಲ್ಲೂ ನಟಿಸಿಲ್ಲ. ಅವರ ಯಾವ ಸಾಧನೆಯನ್ನು ಪರಿಗಣಿಸಿ ಪದ್ಮಶ್ರೀ ಪ್ರಶಸ್ತಿ ನೀಡಿದ್ದಾರೆ. ನೂರಾರು ಚಿತ್ರಗಳಲ್ಲಿ ನಟಿಸಿರುವ ದಕ್ಷಿಣದ ಕಲಾವಿದರಿಗೆ ಯಾಕೆ ಪದ್ಮಶ್ರೀ’ ಇಲ್ಲವೆಂದು ಹೇಳಿದ್ದಾರೆ.
ಬಾಲಕೃಷ್ಣ ಅವರು ನಡೆಸಿಕೊಡುವ ‘ಅನ್ ಸ್ಟಾಪಬಲ್ ಸೀಸನ್ 2’ನಲ್ಲಿ ಮಾತನಾಡಿದ ಜಯಸುಧಾ ದಕ್ಷಿಣದವರಿಗೆ ಮತ್ತು ಉತ್ತರದವರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಮಹಿಳಾ ನಿರ್ದೇಶಕಿಯರ ಪರವಾಗಿಯೂ ಮಾತನಾಡಿರುವ ಅವರು, ‘ವಿಜಯ ನಿರ್ಮಲಾ ಗಿನ್ನಿಸ್ ದಾಖಲೆ ಬರೆದ ನಿರ್ದೇಶಕಿ. ಈವರೆಗೂ ಅವರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ. ಹಾಗಾದರೆ ನಾವು ಏನು ಅಂದುಕೊಳ್ಳಬೇಕು?’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!