ಹೊಸದಿಗಂತ ವರದಿ ಬೆಳಗಾವಿ:
ತಾಲೂಕಿನ ಸುಳಗಾ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವ ಮೂಲಕ ನಾಡದ್ರೋಹಿಗಳು ಪುಂಡಾಟಿಕೆ ಮೆರೆದಿದ್ದಾರೆ.
ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿರುವ ಶಿವಾಜಿ ಮೂರ್ತಿ ಪಕ್ಕದಲ್ಲಿ ಹಾಕಲಾಗಿದ್ದ ಕರ್ನಾಟಕ ಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಸುಟ್ಟಿದ್ದಾರೆ.
ಈ ಘಟನೆಯಿಂದಾಗಿ ಗಡಿಭಾಗ ಬೆಳಗಾವಿಯಲ್ಲಿ ಮತ್ತೆ ಶಾಂತಿ ಕದಡುವ ಪ್ರಯತ್ನ ನಡೆದಿದ್ದು, ನಾಡದ್ರೋಹಿಗಳ ಈ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ನಗರ, ಜಿಲ್ಲೆಯ ಜನತೆ ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದಾಗ ರವಿವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಧ್ವಜಕ್ಕೆ ಬೆಂಕಿ ಹಚ್ಚಲಾಗಿದೆ.