ವಿಧಾನಸಭೆಯಲ್ಲಿ ‘ಕನ್ನಡ ಕಡ್ಡಾಯ’ ವಿಧೇಯಕ ಅಂಗೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ -2024 ಅಂಗೀಕಾರ ಆಗಿದೆ.

ಈ ಬಗ್ಗೆ ಸಚಿವ ಶಿವರಾಜ್ ತಂಗಡಗಿ ಮಾತನಾಡಿದ್ದು, ಅಂಗಡಿಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಇಬೇಕು. ಈ ಬಗ್ಗೆ ವಿಧೇಯಕ ಮಂಡನೆ ಮಾಡುತ್ತಿದ್ದೇವೆ. ಈ ತಿದ್ದುಪಡಿಯನ್ನು ಅಂಗೀಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಅಂಗಡಿ ಮುಂಗಟ್ಟುಗಳ ಮುಂದೆ ಸೂಚನಾ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ ಎಂದು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಕಳಿಸಿತ್ತು. ಇದನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಾಸ್ ಕಳಿಸಿದ್ದರು. ವಿಧೇಯಕ ಮಂಡನೆ ಮಾಡಿ ಅನುಮೋದನೆ ಪಡೆಯಿರಿ ಎಂದಿದ್ದರು. ಅಂತೆಯೇ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆಯಾಗಿದ್ದು, ಅಂಗೀಕಾರ ಪಡೆದಿದೆ.

ಈ ಬಗ್ಗೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿದ್ದು, ಕನ್ನಡ ಕಡ್ಡಾಯ ಎಂದು ಕೇಳಿದ್ದೇ ಆಗಿತ್ತು. ಇನ್ನು ಕಾರ್ಯರೂಪದಲ್ಲಿಯೂ ಕಾಣಬೇಕಿದೆ. ಕನ್ನಡ ಕಡ್ಡಾಯ ಇಲ್ಲದಿದ್ದರೆ ದಂಡ ವಿಧಿಸುವ ಅಂಶವನ್ನೂ ಸೇರಿಸಿ ಎಂದು ಸಲಹೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!