ಕನ್ನಯ್ಯ ಲಾಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉದಯಪುರದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಎನ್ ಐಎ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ .
ಆರೋಪಿಗಳಾದ ರಿಯಾಜ್ ಅಟ್ಟಾರಿ, ಘೌಸ್ ಮೊಹಮ್ಮದ್ ಮತ್ತು ಫರ್ಹಾದ್ ಮೊಹಮ್ಮದ್ ಶೇಕ್ ಅವರನ್ನು ಇಂದು ಉಗ್ರ ನಿಗ್ರಹ ದಳ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆಗಸ್ಟ್ 1ರವರೆಗೆ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ಕೋರ್ಟ್ ಆದೇಶ ಹೊರಡಿಸಿತು.
ಸೋಶಿಯಲ್ ಮೀಡಿಯಾದಲ್ಲಿ ನೂಪರ್ ಶರ್ಮಾ ಪರ ಫೋಸ್ಟ್ ಹಿನ್ನೆಲೆಯಲ್ಲಿ ಜೂನ್ 28 ರಂದು ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಹತ್ಯೆಯಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!