ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಪ್ರತಿಭಟನೆಗಳು ಜೋರಾಗಿದ್ದು, ಅಕ್ಟೋಬರ್ 5 ರಂದು ಕನ್ನಂಬಾಡಿ ಅಣೆಕಟ್ಟಿಗೆ ಮುತ್ತಿಗೆ ಹಾಕುತ್ತೇವೆ ಎಂದು ವಾಟಾಳ್ ನಾಗರಾಜ್ ಘೋಷಣೆ ಮಾಡಿದ್ದಾರೆ.
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಬುರ್ಖಾ ಧರಿಸಿ ಖಾಲಿ ಬಿಂದಿಗೆ ಹಿಡಿದು ವಾಟಾಳ್ ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ಪೊಲೀಸ್ ಭದ್ರತೆ ನಿಯೋಜಿಸಿ ಬಂದ್ ಹತ್ತಿಕ್ಕಿದ್ದಾರೆ, ಬಂದ್ಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ. ಅಕ್ಟೋಬರ್ 5ರಂದು ಕನ್ನಂಬಾಡಿ ಅಣೆಕಟ್ಟಿಗೆ ಮುತ್ತಿಗೆ ಹಾಕುತ್ತೇವೆ, ಸಾಥ್ ನೀಡಿ ಎಂದಿದ್ದಾರೆ.
ಶಾಂತಿಯುತ ಮೆರವಣಿಗೆ ಮಾಡಿದ್ರೂ ತಪ್ಪಾ? ಪ್ರತಿಭಟನೆಗೆ ಅವಕಾಶ ಕೊಡದೆ ರಾಜ್ಯ ಸರ್ಕಾರ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದೆ. ಈ ನಡೆಯನ್ನು ಖಂಡಿಸುತ್ತೇವೆ ಎಂದಿದ್ದಾರೆ.