ಹೊಸದಿಗಂತ ಡಿಜಿಟಲ್ ಡೆಸ್ಕ್
ಕಾಂತಾರ ಚಿತ್ರದ ‘ವರಾಹರೂಪಂ’ ಹಾಡಿನ ವಿವಾದ ಅಂತ್ಯವಾಗಿದ್ದು, ವರಾಹರೂಪಂ ಹಾಡಿನ ಬಳಕೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ತೆರವುಗೊಳಿಸಿದೆ.
ಕೃತಿಚೌರ್ಯದ ಆರೋಪ ಮಾಡಿದ್ದ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು. ಇದೀಗ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದ್ದು, ಒಟಿಟಿಯಲ್ಲೂ ಯೂಟ್ಯೂಬ್, ಮ್ಯೂಸಿಕ್ ಆ್ಯಪ್ ಮೊದಲಾದ ಪ್ಲಾಟ್ಫಾರ್ಮ್ಗಳಲ್ಲಿ ವರಾಹರೂಪಂ ಹಾಡನ್ನು ನೋಡಬಹುದು.
ದೈವಾನು ದೈವಗಳ ಆಶೀರ್ವಾದ ಹಾಗು ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platform ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ . @VKiragandur@ChaluveG @AJANEESHB @Karthik1423 @hombalefilms @KantaraFilmhttps://t.co/STsNEyKmuT
— Rishab Shetty (@shetty_rishab) December 3, 2022
ನಿನ್ನೆಯಷ್ಟೇ ಹೊಂಬಾಳೆ ಬ್ಯಾನರ್, ರಿಷಬ್ ಶೆಟ್ಟಿ, ಪೃಥ್ವಿರಾಜ್ ಫಿಲ್ಮ್ಸ್, ಅಮೆಜಾನ್ ಸೆಲ್ಲರ್ ಸರ್ವೀಸ್ ಪ್ರೈವೇಟ್ ಲಿಮಿಟೆಡ್, ಗೂಗಲ್ ಇಂಡಿಯಾ ಹೆಡ್ ಆಫೀಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಇತರರಿಗೆ ಕೇರಳ ಹೈಕೋರ್ಟ್ ನೋಟಿಸ್ ಜಾರಿ ಮಾಡಿತ್ತು.
ಇದೀಗ ನಟ ರಿಷಬ್ ಶೆಟ್ಟಿಸಂತಸ ವ್ಯಕ್ತಪಡಿಸಿದ್ದಾರೆ. “ದೇವಾನು ದೈವಗಳ ಆಶೀರ್ವಾದ ಹಾಗೂ ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ ಒಟಿಟಿನಲ್ಲಿ ಹಾಡು ಬದಲಾಯಿಸಲಿದ್ದೇವೆ” ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ.