ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದ್ಗೆ ಕರೆ ನೀಡಲಾಗಿದ್ದು, ಇದ ಬಿಸಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೂ ತಟ್ಟಿದೆ. ವಾಹನ ಸಂಪರ್ಕ ಸಮಸ್ಯೆ ಸಾಧ್ಯತೆ ಹಿನ್ನೆಲೆ ನಾಳೆ ಉದ್ಯಾನವನಕ್ಕೆ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿರುವ ಬನ್ನೇರುಘಟ್ಟ ಉದ್ಯಾನಕ್ಕೆ ಪ್ರತೀ ದಿನ ಸಾವಿರಾರು ಪ್ರವಾಸಿಗರು ಭೇಟಿ ನೀಡಿ ವನ್ಯ ಜೀವಿಗಳನ್ನು ವೀಕ್ಷಿಸುತ್ತಿದ್ದರು. ಬಸ್ ಹಾಗೂ ಟ್ಯಾಕ್ಸಿಗಳ ಮೂಲಕವೂ ಆಗಮಿಸುತ್ತಿದ್ದರು.
ಆದರೆ, ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಸಾರಿಗೆ ಸಂಘಟನೆಗಳು ಕೂಡ ಬೆಂಬಲ ಸೂಚಿಸಿದ್ದು, ಸಾರ್ವಜನಿಕರಿಗೆ ವಾಹನದ ಕೊರತೆ ಕಾಡಲಿದೆ. ಹೀಗಾಹಿ ಪ್ರವಾಸಿಗರಿಗೆ ತೊಂದರೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ನಾಳೆ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರಜೆ ನೀಡಲಾಗಿದೆ ಎಂದು ಇಡಿ ಸೂರ್ಯಸೇನ್ ಮಾಹಿತಿ ನೀಡಿದ್ದಾರೆ.