ಕರ್ನಾಟಕ ಬಂದ್: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಳೆ ಕನ್ನಡ ಪರ ಸಂಘಟನೆಗಳಿಂದ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಸಾರಿಗೆ ಸಂಘಟನೆಗಳು ಕೂಡ ಬಂದ್ ಗೆ ಬೆಂಬಲ ನೀಡಿದ್ದು ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು ಎಂದು ಸಾರಿಗೆ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಸಾರಿಗೆ ಸಂಘಟನೆಗಳಿಗೆ ಬೆಂಗಳೂರು ಕಮಿಷನರ್ ಬಿ ದಯಾನಂದ್ ನೋಟಿಸ್ ನೀಡಿದ್ದು, ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಬಹುದು. ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಕಡೆ ಪ್ರತಿಭಟನೆ ಮಾಡಂಗಿಲ್ಲ. ಬೇರೆ ಕಡೆ ಪ್ರತಿಭಟನೆ ಮೆರವಣಿಗೆಗಳನ್ನು ಮಾಡುವಂತಿಲ್ಲ.ಅಕಸ್ಮಾತ್ ಮಾಡಿದ್ರೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದ್ದಾರೆ. .

ಹೈ ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ನೋಟಿಸ್ ನೀಡಲಾಗಿದೆ. ಸಾರಿಗೆ ಸಂಘಟನೆಗಳಿಗೆ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೂಚನೆ ನೀಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!