ಕರ್ನಾಟಕ ಬಂದ್:‌ ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ 144 ಸೆಕ್ಷನ್‌ ಜಾರಿ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಮಿಳುನಾಡು-ಕರ್ನಾಟಕ ನಡುವಿನ ಕಾವೇರಿ ವಿವಾದ ಮತ್ತಷ್ಟು ಉಗ್ರರೂಪ ಪಡೆದಿದ್ದು, ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ನಾಳೆ ಕರ್ನಾಟಕ ಬಂದ್‌ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬೆಂಗಳೂರು ನಗರದಲ್ಲಿ 144ಸೆಕ್ಷನ್‌ ಜಾರಿಯಾಗಿದೆ.

ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಯಾಗುವಂತೆ ನಗರ ಪೊಲೀಸ್‌ ಆಯುಕ್ತ ದಯಾನಂದ್ ಆದೇಶಿಸಿದರು. ನಗರದಲ್ಲಿ ಯಾವುದೇ ಪ್ರತಿಭಟನೆ, ರ್ಯಾಲಿ, ಮೆರವಣಿಗೆ ಮಾಡುವಂತಿಲ್ಲ ಎಂದು ದಯಾನಂದ್‌ ಖಡಕ್‌ ಸೂಚನೆ ನೀಡಿದ್ದಾರೆ. ಬೆಂಗಳೂರು ಬಂದ್‌ ವೇಳೆಯೂ ನಿಷೇಧಾಜ್ಞೆ ಜಾರಿಯಾಗಿತ್ತು, ಇದೀಗ ನಾಳೆಯೂ 144ಸೆಕ್ಷನ್‌ ಇರುವುದರಿಂದ ಬೆಂಗಳೂರಿನಲ್ಲಿ ಬಂದ್‌ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

24ಗಂಟೆಗಳ ಕಾಲ ನಿಷೇಧಾಜ್ಞೆ ಇರಲಿದ್ದು, ಈ ಸಂದರ್ಭದಲ್ಲಿ ಬಲವಂತವಾಗಿ ಬಂದ್‌ಗೆ ಪ್ರೇರೇಪಿಸುವಂತಿಲ್ಲ. ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ ಉಂಟುಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!