ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತುಗಳಿಗೆ ಬ್ಯಾನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
 
ತೆಲಂಗಾಣದಲ್ಲಿ (Telangana) ಕರ್ನಾಟಕ ಸರ್ಕಾರದ (Karnataka Government) ಜಾಹೀರಾತುಗಳನ್ನು ಕೇಂದ್ರ ಚುನಾವಣಾ ಆಯೋಗ (Election Commission) ನಿಷೇಧಿಸಿದೆ.

ಕಳೆದ ಕೆಲವು ದಿನಗಳಿಂದ ತೆಲಂಗಾಣದಲ್ಲಿ ಇಂಗ್ಲಿಷ್ ಮತ್ತು ಸ್ಥಳೀಯ ಮಾಧ್ಯಮಗಳಲ್ಲಿ ಕರ್ನಾಟಕ ಸರ್ಕಾರವು ಜಾಹೀರಾತುಗಳನ್ನು ಪ್ರಕಟಿಸುತ್ತಿದೆ. ಈ ಮೂಲಕ ಕಾಂಗ್ರೆಸ್​ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಕೇಂದ್ರ ಸಚಿವ ಭೂಪೇಂದರ್ ಯಾದವ್, ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಮುಖಂಡರಾದ ಸುಧಾಂಶು ತ್ರಿವೇದಿ ಮತ್ತು ಓಂ ಪಾಠಕ್ ಸೇರಿದಂತೆ ಬಿಜೆಪಿ (BJP) ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಬಿಜೆಪಿ ದೂರಿನ ಬಳಿಕ ಚುನಾವಣಾ ಆಯೋಗ ಇದೀಗ ಕರ್ನಾಟಕ ಸರ್ಕಾರದ ಜಾಹಿರಾತುಗಳನ್ನು ತೆಲಂಗಾಣದಲ್ಲಿ ನಿಷೇಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!