ಹೊಸದಿಗಂತ ಡಿಜಿಟಲ್ ಡೆಸ್ಕ್;
ಕೇರಳದ ವಯನಾಡ್ ಕ್ಷೇತ್ರದ ಭೂಕುಸಿತ ಸಂತ್ರಸ್ತರಿಗೆ ಮನೆ ಕಟ್ಟಿಕೊಡಲು ಸಿಎಂ ಸಿದ್ದರಾಮಯ್ಯನವರ ಸರ್ಕಾರವು ಮುಂದಾಗಿದೆ.
ಕೇರಳದ ವಯನಾಡ್ ನಲ್ಲಿ ಕಳೆದ ವರ್ಷ ಜುಲೈ 30 ರಂದು ಭೂಕುಸಿತ ಸಂಭವಿಸಿ ಜನರು ತಮ್ಮ ಮನೆಗಳನ್ನ ಕಳೆದುಕೊಂಡಿದ್ದರು. ಭೂಕುಸಿತದಿಂದ ಹಾನಿಗೊಳಗಾದ ಸಂತ್ರಸ್ತರ 100 ಕುಟುಂಬಗಳಿಗೆ ಪುನರ್ ವಸತಿ ಕಲ್ಪಿಸಲು ಕರ್ನಾಟಕ ರಾಜ್ಯ ಸರ್ಕಾರ 10 ಕೋಟಿ ರೂಪಾಯಿ ಹಣವನ್ನು ಹಂಚಿಕೆ ಮಾಡಿದೆ.
ರಾಜ್ಯ ಬಜೆಟ್ನ ಪೂರಕ ಅಂದಾಜಿನಲ್ಲಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಅನುದಾನ ನೀಡುತ್ತಿರುವ ಉಲ್ಲೇಖ ಇದೆ. ಕರ್ನಾಟಕ ರಾಜ್ಯ ಸರ್ಕಾರದಿಂದ ಎಸ್ಡಿಆರ್ಎಫ್ ಅನುದಾನ ನೀಡುತ್ತಿರುವುದಾಗಿ ಉಲ್ಲೇಖಿಸಲಾಗಿದೆ.
ಸದ್ಯ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದ ಪ್ರಿಯಾಂಗಾ ಗಾಂಧಿ ಪ್ರತಿನಿಧಿಸುತ್ತಿದ್ದಾರೆ. ಈ ಹಿಂದೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದರು.
ಈ ಹಿಂದೆ ಕರ್ನಾಟಕದ ಆನೆಯೊಂದು ಕೇರಳ ರಾಜ್ಯ ಪ್ರವೇಶಿಸಿ ವ್ಯಕ್ತಿಯ ಸಾವಿಗೆ ಕಾರಣವಾಗಿತ್ತು ಎಂದು ಕೇರಳದಲ್ಲಿ ಸತ್ತಿದ್ದ ವ್ಯಕ್ತಿಗೂ ರಾಜ್ಯ ಅರಣ್ಯ ಇಲಾಖೆ ಪರಿಹಾರ ಘೋಷಿಸಿತ್ತು. ಅದು ಆಗ ಟೀಕೆಗೂ ಗುರಿಯಾಗಿತ್ತು. ಈಗವಯವಾಡ್ ಭೂಕುಸಿತ ಸಂತ್ರಸ್ತರ ಪುನರ್ ವಸತಿಗಾಗಿ 10 ಕೋಟಿ ರೂಪಾಯಿ ಹಣ ನೀಡಲಾಗಿದೆ.
ಕರ್ನಾಟಕದಿಂದ ಉತ್ತರಕಾಂಡ ರಾಜ್ಯಕ್ಕೆ ತೆರೆಳಿದ ಸಂದರ್ಭದಲ್ಲಿ ಪ್ರಕೃತಿ ವೈಪರೀತ್ಯದಿಂದ ಮೃತ ಪಟ್ಟವರ ದೇಹಗಳನ್ನು ಹಾಗೂ ಸಂಕಷ್ಟದಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಲು ಹಾಗೂ ಈ ಪ್ರಕೃತಿ ವೈಪರೀತ್ಯದಿಂದ ಸಂಕಷ್ಟದಲ್ಲಿ ಸಿಲುಕಿದ್ದವರ ನೆರವಿಗಾಗಿ ರಾಜ್ಯದಿಂದ ನಿಯೋಜಿಸಲಾದ ಅಧಿಕಾರಿಗಳ ವೆಚ್ಚಕ್ಕಾಗಿ ಒಟ್ಟು ರೂ.56.64 ಲಕ್ಷಗಳನ್ನು ಮತ್ತು ಕೇರಳ ರಾಜ್ಯದ ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಉಂಟಾದ ಭೂಕುಸಿತದಿಂದ ಹಾನಿಗೊಳಗಾದ 100 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ರೂ.1000.00 ಲಕ್ಷಗಳು ಸೇರಿದಂತೆ ಒಟ್ಟಾರೆಯಾಗಿ ರೂ.1056.64 ಲಕ್ಷಗಳನ್ನು ಎಸ್.ಡಿ.ಆರ್.ಎಫ್ ಅಡಿಯಲ್ಲಿ ರಾಜ್ಯದ ಹೆಚ್ಚುವರಿ ಪಾಲಾಗಿ ಒದಗಿಸಲಾಗುತ್ತಿದೆ. ಆದ್ದರಿಂದ, ಈ ಅಭಿಯಾಚನೆಯಲ್ಲಿ ಸೇರಿಸಿದೆ ಎಂದು ಉಲ್ಲೇಖಿಸಲಾಗಿದೆ.