April 24, 2026
Friday, April 24, 2026
spot_img

ಸಮಾನ ನ್ಯಾಯದ ಸಂಕಲ್ಪ: ಒಳ ಮೀಸಲಾತಿ ಜಾರಿಗೆ ನಿರ್ಣಾಯಕ ಹೆಜ್ಜೆ ಇಟ್ಟ ‘ಕೈ’ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗಾಗಿ ಕಾಯುತ್ತಿದ್ದ ದಲಿತ ಸಮುದಾಯಗಳ ದಶಕಗಳ ಕಾಲದ ಕನಸು ಕೊನೆಗೂ ನನಸಾಗುವ ಕಾಲ ಹತ್ತಿರ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಕುರಿತು ಅತ್ಯಂತ ನಿರ್ಣಾಯಕ ಮತ್ತು ಕ್ರಾಂತಿಕಾರಿ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಪರಿಶಿಷ್ಟ ಜಾತಿಗಳಿಗೆ ಪ್ರಸ್ತುತ ಲಭ್ಯವಿರುವ ಮೀಸಲಾತಿಯನ್ನು ಅತ್ಯಂತ ವೈಜ್ಞಾನಿಕವಾಗಿ ಮತ್ತು ಸಮಾನವಾಗಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಸಂಪುಟದ ತೀರ್ಮಾನದಂತೆ:

ದಲಿತ ಎಡಗೈ ಸಮುದಾಯಕ್ಕೆ: ಶೇ. 5 ರಷ್ಟು ಮೀಸಲಾತಿ.

ದಲಿತ ಬಲಗೈ ಸಮುದಾಯಕ್ಕೆ: ಶೇ. 5 ರಷ್ಟು ಮೀಸಲಾತಿ.

ಇತರೆ ದಲಿತ ವರ್ಗಗಳಿಗೆ: ಶೇ. 5 ರಷ್ಟು ಮೀಸಲಾತಿ.

ಈ ಮೂಲಕ ಒಟ್ಟು ಮೀಸಲಾತಿಯನ್ನು ಮೂರು ಪ್ರಮುಖ ವಿಭಾಗಗಳಾಗಿ ವಿಂಗಡಿಸಿ, ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಸಿದ್ದರಾಮಯ್ಯ ಸರ್ಕಾರವು ಸಮತೋಲಿತ ನಿರ್ಧಾರ ಕೈಗೊಂಡಿದೆ.

ಸುಪ್ರೀಂ ಕೋರ್ಟ್ ಇತ್ತೀಚೆಗೆ ರಾಜ್ಯ ಸರ್ಕಾರಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ನೀಡಿದ ಬೆನ್ನಲ್ಲೇ, ರಾಜ್ಯ ಸರ್ಕಾರ ಈ ವೇಗವಾಗಿ ಕ್ರಮ ಕೈಗೊಂಡಿದೆ. ಈ ನಿರ್ಧಾರವು ಕೇವಲ ರಾಜಕೀಯ ನಡೆಯಲ್ಲ, ಬದಲಿಗೆ ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ಮುಖ್ಯವಾಹಿನಿಯಲ್ಲಿ ಸಮಾನ ಅವಕಾಶ ಒದಗಿಸುವ ಮಹತ್ವದ ಪ್ರಯತ್ನ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಹೊಸ ವ್ಯವಸ್ಥೆಯಿಂದಾಗಿ ಇದುವರೆಗೆ ಮೀಸಲಾತಿಯ ಸೌಲಭ್ಯಗಳಿಂದ ವಂಚಿತರಾಗಿದ್ದ ಅತಿ ಸಣ್ಣ ಮತ್ತು ಹಿಂದುಳಿದ ದಲಿತ ಉಪಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ದೊರೆಯಲಿವೆ. ರಾಜ್ಯ ಸರ್ಕಾರದ ಈ ‘ಕ್ರಾಂತಿಕಾರಿ’ ನಡೆ ದಲಿತ ಸಂಘಟನೆಗಳ ಮೆಚ್ಚುಗೆಗೆ ಪಾತ್ರವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !