ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್‌ಗೆ ಬಿಗ್ ರಿಲೀಫ್‌ ನೀಡಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕ್ರಿಮಿನಲ್ ಪ್ರಕರಣ ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿ ಆದೇಶ ನೀಡಿದೆ.

ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಅಲೋಕ್ ಕುಮಾರ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈಗ ಬಿಗ್ ರಿಲೀಫ್ ನೀಡಿದ್ದು,
ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಮಲ್ಲಿಕಾರ್ಜುನ್ ಬಿ.ಎಂ ರವಿ ಅವರ ದೂರು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಘಟನೆಯ ಹಿನ್ನೆಲೆ :

2014ರಲ್ಲಿ ಬೆಂಗಳೂರಿನ ವೈಯಾಲಿ ಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಆರೆಂಜ್ ಬಾರ್‌ನಲ್ಲಿ ಮದ್ಯ ಸೇವಿಸುವ ಸಂದರ್ಭದಲ್ಲಿ ಗಲಾಟೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಕ್ರಿಮಿನಲ್ ಪ್ರಕರಣ ಕೈಬಿಡಲು ಇತರೆ ಪೊಲೀಸರ ಮೂಲಕ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಅಲೋಕ್ ಕುಮಾರ್ ವಿರುದ್ಧ ಕೇಳಿಬಂದಿತ್ತು. ಬಿಎಂ ಮಲ್ಲಿಕಾರ್ಜುನ ಅಲಿಯಾಸ್‌ ರವಿ ಅವರು ಅಲೋಕ್ ಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಬಿ ರಿಪೋರ್ಟ್ ತಿರಸ್ಕರಿಸಿದ್ದ ವಿಶೇಷ ನ್ಯಾಯಾಲಯವು ಅಲೋಕ್ ಕುಮಾರ್ ವಿರುದ್ಧ ವಿಚಾರಣೆ ಮುಂದುವರೆಸಿತ್ತು. ಇದನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!