ಕರ್ನಾಟಕ ಅಭಿವೃದ್ಧಿಯ ರಥದಂತೆ ಸಾಗುತ್ತಿದೆ : ಕನ್ನಡದಲ್ಲಿ ಮಾತು ಆರಂಭಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಉದ್ಘಾಟಿಸಿ ನಂತರ ಕನ್ನಡದಲ್ಲೇ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭಿಸಿದರು.

ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರ. ಸಿರಿಗನ್ನಡಂ ಗೆಲ್ಗೆ ಸಿಗನ್ನಡಂ ಬಾಳ್ಗೆ ಎಂದು ರಾಷ್ಟ್ರಕವಿ ಕುವೆಂಪು ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು.

ಈ ವೇಳೆ ಕರ್ನಾಟಕ ಅಭಿವೃದ್ಧಿಯ ರಥದಂತೆ ಸಾಗುತ್ತಿದೆ ಎಂದು ಮೋದಿ ಕನ್ನಡದಲ್ಲೇ ಉಚ್ಛರಿಸಿದರು.

ಶಿವಮೊಗ್ಗದಿಂದ ನಾನು ಬೆಳಗಾವಿಗೆ ಹೋಗಬೇಕಿದೆ. ಶಿವಮೊಗ್ಗದ ಬಹುದಿನದ ಬೇಡಿಕೆ ಈಗ ಈಡೇರಿದೆ. ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಬಂದಿದೆ. ಇಂದು ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇನೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!